* * * * * * HASSAN DISTRICT POLICE

Saturday, December 30, 2017

PRESS NOTE 27-12-2017

                                            ಪತ್ರಿಕಾ ಪ್ರಕಟಣೆ            ದಿನಾಂಕ: 27-12-2017

ಬೈಕ್  ನಿಯಂತ್ರಣ ತಪ್ಪಿ, ಬೈಕ್ ಹಿಂಬದಿ ಕುಳಿತಿದ್ದ ವ್ಯಕ್ತಿ ಸಾವು

ದಿನಾಂಕ: 23-12-2017 ರಂದು ಮಧ್ಯಾಹ್ನ 3-00 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಕಸಬಾ ಹೋಬಳಿ, ದಿಂಡಗೂರು ಗ್ರಾಮದ ವಾಸಿ ಶ್ರೀ ಕೃಷ್ಣಮೂರ್ತಿ, ರವರು  ಅಳಿಯ ಶ್ರೀ ಮಂಜುನಾಥ್, ರವರ ಬಾಬ್ತು ಕೆಎ-02- ಹೆಚ್ಕ್ಯೂ-8518 ರ ಬೈಕ್ನಲ್ಲಿ ಚನ್ನರಾಯಪಟ್ಟಣಕ್ಕೆ ಹೋಗಲು ಚನ್ನರಾಯಪಟ್ಟಣ ತಾಲ್ಲೂಕು, ಬಾಗೂರು ಗೇಟ್ ಬಳಿ ಎನ್ ಹೆಚ್-75, ಬಿ.ಎಂ. ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಸೋಲಾರ್ ಲೈಟ್ ಕಂಬಕ್ಕೆ ಡಿಕ್ಕಿ ಮಾಡಿದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಶ್ರೀ ಕೃಷ್ಣಮೂರ್ತಿ, ರವರಿಗೆ ತೀವ್ರ ಸ್ವರೂಪದ ರಕ್ತಗಾಯಳಾಗಿದ್ದು, ಚಿಕಿತ್ಸೆಗಾಗಿ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಿನಾಂಕ: 25-12-2017 ರಂದು  ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಶ್ರೀ ಕೃಷ್ಣಮೂರ್ತಿ, 50 ವರ್ಷ, ದಿಂಡಗೂರು ಗ್ರಾಮ, ಕಸಬಾ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು ರವರು ಮಾರ್ಗ ಮಧ್ಯೆ ಮೃತಪಟ್ಟಿರುತ್ತಾರೆಂದು ಮೃತರ ಪತ್ನಿ ಶ್ರೀಮತಿ ಪ್ರೇಮ, ರವರು ಕೊಟ್ಟ ದೂರಿನ ಮೇರೆಗೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಿಸಿ ತನಿಖೆಯಲ್ಲಿರುತ್ತೆ.

No comments: