* * * * * * HASSAN DISTRICT POLICE

Friday, January 5, 2018

PRESS NOTE : 04-01-2018

ಪತ್ರಿಕಾ ಪ್ರಕಟಣೆ              ದಿನಾಂಕ: 04-01-2018

ಡೋಜರ್ ವಾಹನ ಡಿಕ್ಕಿ, ಬಸ್ ನಿಲ್ದಾಣದ ಬಳಿ ನಿಂತಿದ್ದ ವ್ಯಕ್ತಿ ಸಾವು.
     ದಿನಾಂಕ: 03-01-2018 ರಂದು ಬೆಳಿಗ್ಗೆ 11-30 ಗಂಟೆ ಸಮಯದಲ್ಲಿ ಹಾಸನ ತಾಲ್ಲೂಕು, ಕಟ್ಟಾಯ ಹೋಬಳಿ, ಕೋಡರಾಮನಹಳ್ಳಿ ಗ್ರಾಮದ ವಾಸಿ ಶ್ರೀ ಸಣ್ಣಶೆಟ್ಟಿ, ರವರು ಕೋಡರಾಮನಹಳ್ಳಿ ಗ್ರಾಮದ ಬಸ್ ನಿಲ್ದಾಣದ  ಹತ್ತಿರ ನಿಂತಿದ್ದಾಗ ಹಿಂಬದಿಯಿಂದ ಬಂದ ಕೆಎ-09, ಎಂಬಿ-7028 ರ ಡೋಜರ್ ವಾಹನದಲ್ಲಿ ಹಾಸನ-ಅರಕಲಗೂಡು ರಸ್ತೆಯ ಕಾಮಗಾರಿ ಕೆಲಸ ಮಾಡುತ್ತಿದ್ದ ವಾಹನದ ಚಾಲಕ ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಶ್ರೀ ಸಣ್ಣಶೆಟ್ಟಿ, ರವರಿಗೆ ಗುದ್ದಿಸಿದ ಪರಿಣಾಮ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹಾಸನದ ಮಂಗಳಾ ಆಸ್ಪತ್ರೆಗೆ ದಾಖಲಿಸಿದ್ದು, ಶ್ರೀ ಸಣ್ಣಶೆಟ್ಟಿ ಬಿನ್ ಲೇಟ್ ಪಾಪಶೆಟ್ಟಿ, 70 ವರ್ಷ, ಕೋಡರಾಮನಹಳ್ಳಿ ಗ್ರಾಮ, ಕಟ್ಟಾಯ ಹೋಬಳಿ, ಹಾಸನ ತಾಲ್ಲುಕು ರವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆಂದು ಪ್ರತ್ಯಕ್ಷದರ್ಶಿ ಶ್ರೀ ಶಿವಣ್ಣಶೆಟ್ಟಿ, ರವರು ಕೊಟ್ಟ ದೂರಿನ ಮೇರೆಗೆ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಬುಲೆರೋ ಗೂಡ್ಸ್ ವಾಹನ ಡಿಕ್ಕಿ, ಪಾದಚಾರಿ ಸಾವು
          ದಿನಾಂಕ: 03-01-2018 ರಂದು ರಾತ್ರಿ 10-30 ಗಂಟೆ ಸಮಯದಲ್ಲಿ ಹಾಸನದ ವಲ್ಲಾಭಾಯಿ ರಸ್ತೆ, 5 ಕ್ರಾಸ್ ವಾಸಿ  ಶ್ರೀ ಚಂದನ್ಕುಮಾರ್ರವರು ಅತ್ತೆ ಮನೆಯಾದ ಹಾಸನ ತಾಲ್ಲೂಕು, ಕಸಬಾ ಹೋಬಳಿ, ಹನುಮಂತಪುರ ಗ್ರಾಮಕ್ಕೆ ಬಂದಿದ್ದು, ಮೂತ್ರ ವಿಸಜರ್ಿಸಲು ಹಾಸನ-ಅರಕಲಗೂಡು ರಸ್ತೆಯ ಎಡಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಹಿಂಬದಿಯಿಂದ ಬಂದ ಕೆಎ-14 ಬಿ-4098 ರ ಬುಲೆರೋ ಗೂಡ್ಸ್ ವಾಹನದ ಚಾಲಕ ತನ್ನ ವಾಹನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಶ್ರೀ ಚಂದನ್ಕುಮಾರ್, ರವರಿಗೆ ಡಿಕ್ಕಿ ಮಾಡಿದ ಪರಿಣಾಮ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹಾಸನ ಜನಪ್ರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಶ್ರೀ ಚಂದನ್ಕುಮಾರ್ ಬಿನ್ ಲೇಟ್ ವೇದಾಂತಚಾರ್, 28 ವರ್ಷ, ವಲ್ಲಾಬಾಯಿ ರಸ್ತೆ, ಹಾಸನ ರವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆಂದು  ಮೃತರ ಮಾವ ಶ್ರೀ ಶಂಕರೇಗೌಡ, ರವರು ಕೊಟ್ಟ ದೂರಿನ ಮೇರೆಗೆ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಹುಡುಗಿ ಕಾಣೆ


     ದಿನಾಂಕ: 29-12-2017 ರಂದು ರಾತ್ರಿ 7-00 ಗಂಟೆಗೆ ಹೊಳೆನರಸೀಪುರ ತಾಲ್ಲೂಕು, ಕಸಬಾ ಹೋಬಳಿ, ಹಿರೇಹಳ್ಳಿ ಕೊಪ್ಪಲು ಗ್ರಾಮದ ವಾಸಿ ಶ್ರೀ ನಾಗರಾಜ್, ರವರ ಪತ್ನಿ ಶ್ರೀಮತಿ ಚೈತ್ರಾ, ಮನೆಯಿಂದ ಶೌಚಾಲಯಕ್ಕೆ ಹೋಗಿ ಬರುತ್ತನೇಂದು ಮನೆಯಲ್ಲಿ ಹೇಳಿ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಚೈತ್ರಾಳ ಪತಿ ಶ್ರೀ ನಾಗರಾಜ್, ರವರು ಕೊಟ್ಟ ದೂರಿನ ಮೇರೆಗೆ ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರರಕಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ಶ್ರೀಮತಿ ಚೈತ್ರಾ ಕೋಂ ನಾಗರಾಜ್, 22 ವರ್ಷ, 5'2 ಅಡಿ ಎತ್ತರ, ಬಿಳಿ ಬಣ್ಣ, ಸಾದಾರಣ ಮೈಕಟ್ಟು, ದುಂಡು ಮುಖ, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಲೆಗ್ಗಿಂನ್ಸ್, ಧರಿಸಿರುತ್ತಾರೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ 08176-252333 ಕ್ಕೆ ಸಂಪರ್ಕಿಸುವುದು.

No comments: