* * * * * * HASSAN DISTRICT POLICE

Monday, March 5, 2018

PRESS NOTE : 03-03-2018


ಪತ್ರಿಕಾ ಪ್ರಕಟಣೆ     ದಿನಾಂಕ: 03-03-2018.
ಜೂಜಾಡುತ್ತಿದ್ದ ಮೂವರ ಬಂಧನ, ಬಂಧಿತರಿಂದ ಸುಮಾರು 1740/- ನಗದು ವಶ:
       ದಿನಾಂಕ: 02-3-2018 ರಂದು ಸಂಜೆ 4-30 ಗಂಟೆ ಸಮಯದಲ್ಲಿ ಹಾಸನದ ಗುಡ್ಡೇನಹಳ್ಳಿ ದಾಖ್ಲೆ ಪ್ಲಾಂಟಸರ್್ ಕಾಫಿ ಕ್ಯೂರಿಂಗ್ ಹಿಂಭಾಗದ ಖಾಲಿ ಜಾಗದಲ್ಲಿ ಅಂದರ್-ಬಾಹರ್ ಜೂಜಾಟಾಡುತ್ತಿದ್ದಾರೆಂದು ಶ್ರೀ ಆರೋಕಿಯಪ್ಪ, ಪಿಎಸ್ಐ ಪೆನ್ಷನ್ ಮೊಹಲ್ಲಾ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಜೂಜಾಡುತ್ತಿದ್ದವರನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ 1) ಚೇತನ್ಕುಮಾರ್ @ನಾಗಣ್ಣ ಬಿನ್ ಗಂಗಾದರ್, 25 ವರ್ಷ, 2) ಮನು ಬಿನ್ ಮಂಜೇಗೌಡ, 23 ವರ್ಷ, 3) ಸಾಗರ್ ಬಿನ್ ಬೋರೇಗೌಡ, 28 ವರ್ಷ ಎಲ್ಲರೂರು ಉದ್ದೂರು ಗ್ರಾಮ, ಹಾಸನ ತಾಲ್ಲೂಕು ಎಂದು ತಿಳಿಸಿದ್ದವರನ್ನು ದಸ್ತಗಿರಿ ಮಾಡಿಕೊಂಡು ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 1740/- ನಗದನ್ನು ಅಮಾನತ್ತುಪಡಿಸಿಕೊಂಡು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.
ಗೂಡ್ಸ್ ವಾಹನ ಬೈಕಿಗೆ ಡಿಕ್ಕಿ ಬೈಕ್ ಸವಾರನ ಸಾವು
    ದಿನಾಂಕ: 02-03-2018 ರಂದು ರಾತ್ರಿ 08-45 ಗಂಟೆ ಸಮಯದಲ್ಲಿ ಅರಸೀಕೆರೆ ತಾಲ್ಲೂಕು, ಜಾವಗಲ್ ಹೋಬಳಿ, ಅರಕೆರೆ ಗ್ರಾಮದ  ವಸಂತಕುಮಾರ್  ರವರ ಬಾಬ್ತು ಕೆಎ-13-ಈಎಲ್-1890 ರ ಡ್ರೀಮ್ ಯುಗ ಬೈಕಿನಲ್ಲಿ  ಬಾಣಾವರ-ಜಾವಗಲ್ ರಸ್ತೆಯಲ್ಲಿರುವ ಇಟ್ಟಿಗೆ ಫ್ಯಾಕ್ಟರಿಯ ಹತ್ತಿರದ ಎನ್ಹೆಚ್-234 ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದಾಗ  ಮುಂದೆ ಕೆಎಲ್-55-ಎ-9033 ರ ಗೂಡ್ಸ್ ವಾಹನದ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಹೋಗಿ ಯಾವುದೇ ಮುನ್ಸೂಚನೆ ನೀಡದೆ ದಿಡೀರನೆ ಬ್ರೇಕ್ ಹಾಕಿ ವಾಹನವನ್ನು ಹಿಂದಕ್ಕೆ  ತೆಗೆದುಕೊಳ್ಳುತ್ತಿದ್ದಾಗ ಹಿಂದಿನಿಂದ ಬೈಕ್ನಲ್ಲಿ  ಬರುತ್ತಿದ್ದ  ವಸಂತಕುಮಾರ್ ರವರಿಗೆ ಗುದ್ದಿಸಿದ ಪರಿಣಾಮ ಬೈಕ್ ಸಮೇತ ರಸ್ತೆಗೆ ಬಿದ್ದು, ತೀವ್ರ ಸ್ವರೂಪದ ರಕ್ತಗಾಯಗಳಾಗಿ ಚಿಕಿತ್ಸೆಗಾಗಿ ಅರಸೀಕೆರೆ ಸಕರ್ಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸಕರ್ಾರಿ ಆಸ್ಪತ್ರೆಗೆ ಸೇರಿಸಿದ್ದು, ಪರೀಕ್ಷಿಸಿದ ವೈದ್ಯರು ವಸಂತಕುಮಾರ್ ಬಿನ್ ಲೇಟ್ ಬಸವಲಿಂಗಪ್ಪ,  28 ವರ್ಷ ರವರು ಮೃತಪಟ್ಟಿರುತ್ತಾರೆಂದು ಪ್ರತ್ಯಕ್ಷದಶರ್ಿ ಶ್ರೀ ಶರತ್ ರವರು ಕೊಟ್ಟ ದೂರಿನ ಮೇರೆಗೆ ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತದೆ.
ಅಪರಿಚಿತ  ವಾಹನ ಡಿಕ್ಕಿ ಪಾದಾಚಾರಿ ವ್ಯಕ್ತಿ ಸಾವು
       ದಿನಾಂಕ: 02-03-2018  ರಂದು ಸಂಜೆ 07-00 ಗಂಟೆ ಸಮಯದಲ್ಲಿ  ಬೇಲೂರು ತಾಲ್ಲೂಕು, ಹಳೇಬೀಡು ಹೋಬಳಿ, ಸಿದ್ದಾಪುರ ಗ್ರಾಮದ ಕಾಳಯ್ಯ ರವರು ಕೆಲಸದ ನಿಮಿತ್ತ ಹಳೇಬೀಡಿಗೆ  ಹೋಗಲು  ಹಳೇಬೀಡು-ಹಗರೆ ರಸ್ತೆಯ ಸಿದ್ದಾಪುರ ಗ್ರಾಮದ ಡೈರಿಯ ಹತ್ತಿರ ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದಾಗ ಯಾವುದೋ ವಾಹನದ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಡಿಕ್ಕಿ ಮಾಡಿದ ಪರಿಣಾಮ, ತೀವ್ರ ಸ್ವರೂಪದ ರಕ್ತಗಾಯಗಳಾಗಿ  ಕಾಳಯ್ಯ, 58 ವರ್ಷ ರವರು ಮೃತಪಟ್ಟಿರುತ್ತಾರೆಂದು ಮೃತರ ಮಗ ಶ್ರೀ ಚಂದ್ರಶೇಖರ ರವರು ಕೊಟ್ಟ ದೂರಿನ ಮೇರೆಗೆ ಹಳೇಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತದೆ.


No comments: