* * * * * * HASSAN DISTRICT POLICE

Tuesday, March 13, 2018

PRESS NOTE : 08-03-2018


ಪತ್ರಿಕಾ ಪ್ರಕಟಣೆ         ದಿನಾಂಕ: 08-03-2018
ಅಪರಿಚಿತ ವಾಹನ ಡಿಕ್ಕಿ, ಬೈಕ್ ಸಾವರ ಸಾವು:
ದಿನಾಂಕ: 08-03-2018 ರಂದು ಬೆಳಿಗ್ಗೆ 6-00 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಹಿರೀಸಾವೆ ಹೋಬಳಿ, ಬೊರೋಗೌಡನಕೊಪ್ಪಲು ಗ್ರಾಮದ ವಾಸಿ ಶ್ರೀ ನಾಗರಾಜು, ರವರ ಬಾಬ್ತು ಕೆಎ-13 ಇಎ-3598 ರ ಟಿವಿಎಸ್ ಮೊಪೆಡ್ ಬೈಕ್ನಲ್ಲಿ ಹಿರೀಸಾವೆ ತೋಟಿ ವೈದ್ಯರಲ್ಲಿ ಅಸ್ತಮ ಕಾಯಿಲೆಗೆ ಚಿಕಿತ್ಸೆ ಪಡೆಯಲು ಚನ್ನರಾಯಪಟ್ಟಣ ತಾಲ್ಲೂಕು, ಹಿರೀಸಾವೆ-ಶ್ರವಣಬೆಳಗೊಳ ರಸ್ತೆ, ಅರೆಕೆರೆ ಗ್ರಾಮದ ಹತ್ತಿರ ಹೋಗುತ್ತಿದ್ದಾಗ ಯಾವುದೋ ವಾಹನ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಬೈಕ್ಗೆ ಡಿಕ್ಕಿ ಮಾಡಿದ ಪರಿಣಾಮ ಶ್ರೀ ನಾಗರಾಜು ಬಿನ್ ರಾಮಣ್ಣ,  48 ವರ್ಷ, ಬೋರೇಗೌಡನಕೊಪ್ಪಲು ಗ್ರಾಮ, ಹಿರೀಸಾವೆ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು ರವರಿಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆಂದು ಮೃತರ ಪತ್ನಿ ಶ್ರೀಮತಿ ಮಂಜುಳ, ರವರು ಕೊಟ್ಟ ದೂರಿನ ಮೇರೆಗೆ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

No comments: