ಪತ್ರಿಕಾ ಪ್ರಕಟಣೆ
ದಿನಾಂಕ: 12-03-2018
ಲಾರಿ ಬೈಕ್ಗೆ ಡಿಕ್ಕಿ, ಬೈಕ್ ಸಾವರ ಸಾವು.
ದಿನಾಂಕ: 11-03-2018 ರಂದು ಸಂಜೆ 6-00 ಗಂಟೆ
ಸಮಯದಲ್ಲಿ ಅರಕಲಗೂಡು ತಾಲ್ಲೂಕು, ಕಬ್ಬಳಿಗೆರೆ ಗ್ರಾಮದ ವಾಸಿ ಶ್ರೀ ಜಗದೀಶ್, ರವರ ಬಾಬ್ತು
ಕೆಎ-13 ಇಬಿ-5855 ರ
ಬೈಕ್ನಲ್ಲಿ ಪತ್ನಿ ಶ್ರೀಮತಿ ಸುನಂದಮ್ಮ, ರವರೊಂದಿಗೆ
ಅರಕಲಗೂಡು ತಾಲ್ಲೂಕು, ರಾಮೇನಹಳ್ಳಿ ಸಕರ್ಾರಿ ಶಾಲೆಯ ಹತ್ತಿರ ಹೋಗುತ್ತಿದ್ದಾಗ
ಎದುರುಗಡೆಯಿಂದ ಬಂದ ಕೆಎ-13 ಸಿ-2392 ರ ಅಶೋಕ ಲೈ
ಲ್ಯಾಂಡ್ ಲಾರಿಯ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಬೈಕ್ಗೆ
ಡಿಕ್ಕಿ ಮಾಡಿದ ಪರಿಣಾಮ ಶ್ರೀ ಜಗದೀಶ್ ಮತ್ತು ಶ್ರೀಮತಿ ಸುನಂದಮ್ಮ, ರವರುಗಳಿಗೆ
ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅರಕಲಗೂಡು
ಸಕರ್ಾರಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆ ಮೇರೆಗೆ
ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಯಪ್ರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಶ್ರೀ ಜಗದೀಶ್
ಬಿನ್ ಚಂದ್ರೇಗೌಡ, 23 ವರ್ಷ, ಕಬ್ಬಳಿಗೆರೆ
ಗ್ರಾಮ,
ಅರಕಲಗೂಡು ತಾಲ್ಲೂಕು, ರವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.
ಶ್ರೀಮತಿ ಸುನಂದಮ್ಮ, ರವರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಪಡೆಯುತ್ತಿರುತ್ತಾರೆಂದು ಮೃತರ ತಂದೆ ಶ್ರೀ ಚಂದ್ರೇಗೌಡ, ರವರು ಕೊಟ್ಟ
ದೂರಿನ ಮೇರೆಗೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.
ಹುಡುಗಿ ಕಾಣೆ
ದಿನಾಂಕ: 07-03-2018 ರಂದು
ಬೆಳಿಗ್ಗೆ 7-00 ಗಂಟೆ ಸಮಯದಲ್ಲಿ ಅರಕಲಗೂಡು ತಾಲ್ಲೂಕು, ಕಸಬಾ ಹೋಬಳಿ, ನೆಲಮನೆ
ಗ್ರಾಮದ ವಾಸಿ ಶ್ರೀ ಸಣ್ಣಪ್ಪ, ರವರ ಮಗಳು ಕು|| ಶ್ವೇತಾ, ಅರಕಲಗೂಡಿನ
ಪ್ರಥಮ ದಜರ್ೆ ಕಾಲೇಜಿನಲ್ಲಿ ವ್ಯಾಸಂಗ ಮಾಡಿಕೊಂಡಿದ್ದು, ಎಂದಿನಂತೆ
ಕಾಲೇಜಿಗೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ
ಕಾಣೆಯಾಗಿರುತ್ತಾಳೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು
ಕು||
ಶ್ವೇತಾಳ ತಂದೆ ಶ್ರೀ ಸಣ್ಣಪ್ಪ, ರವರು ಕೊಟ್ಟ ದೂರಿನ ಮೇರೆಗೆ
ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ಕು|| ಶ್ವೇತಾ ಬಿನ್
ಸಣ್ಣಪ್ಪ,
21 ವರ್ಷ, 5 ಳಿ ಅಡಿ ಎತ್ತರ, ಎಣ್ಣೆಗೆಂಪು
ಬಣ್ಣ ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ. ಈ ಹುಡುಗಿಯ ಸುಳಿವು
ಸಿಕ್ಕಲ್ಲಿ 08176-220249 ಕ್ಕೆ ಸಂಪರ್ಕಿಸುವುದು.
No comments:
Post a Comment