ಪತ್ರಿಕಾ
ಪ್ರಕಟಣೆ ದಿನಾಂಕ: 29-04-2018.
ಜೂಜಾಡುತ್ತಿದ್ದ
ನಾಲ್ವರ ಬಂಧನ, ಬಂಧಿತರಿಂದ
ಸುಮಾರು 3600/- ನಗದು ವಶ: ದಿನಾಂಕ: 28-04-2018 ರಂದು ಸಂಜೆ 4-00 ಗಂಟೆ ಸಮಯದಲ್ಲಿ ಬೇಲೂರು
ತಾಲ್ಲೂಕು, ಅರೇಹಳ್ಳಿ ಹೋಬಳಿ, ಕಣದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ
ಜೂಜಾಟಾಡುತ್ತಿದ್ದಾರೆಂದು ಶ್ರೀ ಸಿದ್ದರಾಜು, ಪಿಎಸ್ಐ, ಅರೇಹಳ್ಳಿ ಪೊಲೀಸ್ ಠಾಣೆ, ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ
ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಜೂಜಾಡುತ್ತಿದ್ದವರನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ 1) ಸತೀಶ್ ಚಂದ್ರ ಬಿನ್
ಕೆ.ಆರ್. ರಾಮಕೃಷ್ಣ, 29 ವರ್ಷ, ಕುಪ್ಪಗೋಡು ಗ್ರಾಮ, ಅರೇಹಳ್ಳಿ ಹೋಬಳಿ, ಬೇಲೂರು ತಾಲ್ಲೂಕು 2) ಸೈಯಾದ್ ಇಬ್ರಾಹಿಂ ಬಿನ್
ಸೈಯಾದ್ ಅಹ್ಮದ್, 39 ವರ್ಷ, ಆಂಜನೇಯ ದೇವಸ್ಥಾನದ ಹತ್ತಿರ ಗೋಣಿಬೀಡು ಹೋಬಳಿ, ಮೂಡಿಗೆರೆ ತಾಲ್ಲೂಕು 3) ಆನಂದ ಬಿನ್ ಕೃಷ್ಣಪ್ಪ, 36 ವರ್ಷ, ಕಮ್ಮರಗೋಡು ಗ್ರಾಮ, ಗೋಣಿಬೀಡು ಹೋಬಳಿ, ಮೂಡಿಗೆರೆ ತಾಲ್ಲೂಕು 4) ಸುನೀಲ್ಕುಮಾರ ಬಿನ್ ಬಸವಯ್ಯ, 28 ವರ್ಷ, ಮಾಡಗೋಡು ಗ್ರಾಮ, ಕಸಬಾ ಹೋಬಳಿ, ಬೇಲೂರು ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ
ಮಾಡಿಕೊಂಡು ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 3,600/- ನಗದನ್ನು ಅಮಾನತ್ತುಪಡಿಸಿಕೊಂಡು ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ
ಕೈಗೊಂಡಿರುತ್ತೆ.
ಗಂಡಸು ಕಾಣೆ : ದಿನಾಂಕ: 22-04-2018 ರಂದು ಬೆಳಿಗ್ಗೆ 9-00 ಗಂಟೆ ಸಮಯದಲ್ಲಿ ಬೇಲೂರು
ತಾಲ್ಲೂಕು, ಅರೇಹಳ್ಳಿ ಹೋಬಳಿ, ಮುರೇಹಳ್ಳಿ ಗ್ರಾಮದ ವಾಸಿ ಶ್ರೀ ಅಣ್ಣಪ್ಪ, ರವರು ಪಿಕ್-ಆಪ್ ವಾಹನದ ಕೀ ಕಳೆದುಹೋಗಿದ್ದು, ಹೊಸ ಕೀಯನ್ನು ಮಾಡಿಸಿಕೊಂಡು ಬರುತ್ತೇನೆಂದು ಮನೆಯಲ್ಲಿ
ಹೇಳಿ ಹೋದವರು ಇದುವರೆವಿಗೂ ವಾಪಸ್ ಮೆನಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ
ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು
ಶ್ರೀ ಅಣ್ಣಪ್ಪ, ರವರ ಪತ್ನಿ ಶ್ರೀಮತಿ ಶೋಭ, ರವರು ಕೊಟ್ಟ ದೂರಿನ ಮೇರೆಗೆ ಅರೇಹಳ್ಳಿ ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ,
ಕಾಣೆಯಾದ
ವ್ಯಕ್ತಿಯ ಚಹರೆ: ಶ್ರೀ ಅಣ್ಣಪ್ಪ ಬಿನ್ ಲೇಟ್
ಹುಚ್ಚಯ್ಯ, 36 ವರ್ಷ, 5'8 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ
ಕಪ್ಪು ಬಣ್ಣದ ಶರ್ಟ್, ನೀಲಿ ಜೀನ್ಸ್ ಫ್ಯಾಂಟ್
ಧರಿಸಿರುತ್ತಾರೆ. ಈ ವ್ಯಕ್ತಿಯ ಸುಳಿವು ಸಿಕ್ಕಲ್ಲಿ 08177-221342 ಕ್ಕೆ ಸಂಪರ್ಕಿಸುವುದು.
ಹುಡುಗಿ ಕಾಣೆ : ದಿನಾಂಕ: 27-04-2018 ರಂದು ಬೆಳಿಗ್ಗೆ 10-00 ಗಂಟೆ ಸಮಯದಲ್ಲಿ ಬೇಲೂರು
ತಾಲ್ಲೂಕು, ಹಳೇಬೀಡು ಹೋಬಳಿ, ಮಲಿಯಪ್ಪನಕೊಪ್ಪಲು ಗ್ರಾಮದ ವಾಸಿ ಶ್ರೀ ಶಿವಮೂರ್ತಿ, ರವರ ಮಗಳು ಕು|| ಪ್ರೀತಿ, ಮನೆಯಿಂದ ಹೊರಗೆ ಹೋದವಳು ಇದುವರೆವಿಗೂ ವಾಪಸ್ ಮನೆಗೆ
ಬಾರದೆ ಕಾಣೆಯಾಗಿರುತ್ತಾಳೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಕು|| ಪ್ರೀತಿಯ ತಂದೆ ಶ್ರೀ ಶಿವಮೂರ್ತಿ, ರವರು ಕೊಟ್ಟ ದೂರಿನ ಮೇರೆಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ಕು|| ಪ್ರೀತಿ ಬಿನ್ ಶಿವಮೂರ್ತಿ, 18 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಾಣಾ ಮೈಕಟ್ಟು, ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರ
ಧರಿಸಿರುತ್ತಾರೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ
08177-273201 ಕ್ಕೆ ಸಂಪರ್ಕಿಸುವುದು.
ಹುಡುಗಿ ಕಾಣೆ : ದಿನಾಂಕ: 01-03-2018 ರಂದು ಬೆಳಿಗ್ಗೆ 10-30 ಗಂಟೆ ಸಮಯದಲ್ಲಿ ಬೇಲೂರು
ತಾಲ್ಲೂಕು, ಅರೇಹಳ್ಳಿ ಹೋಬಳಿ, ಚೀಕನಹಳ್ಳಿ ಗ್ರಾಮದ ವಾಸಿ ಶ್ರೀ ಕೃಷ್ಣ, ರವರ ಮಗಳು ಕು|| ಕೀರ್ತಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ
ಮಡಂತ್ಯಾರು ಸೆಕ್ರೀಡ್ ಆಟ್ಸರ್ ಕಾಲೇಜಿನಲ್ಲಿ ಪ್ರಥಮ ಬಿ.ಎ. ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ
ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ
ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಕು|| ಕೀರ್ತಿಯ ತಂದೆ ಶ್ರೀ ಕೃಷ್ಣ, ರವರು ದಿನಾಂಕ: 28-04-2018 ರಂದು ಕೊಟ್ಟ ದೂರಿನ
ಮೇರೆಗೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕು|| ಕೀರ್ತಿ ಬಿನ್ ಕೃಷ್ಣ, 20 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು, ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರ
ಧರಿಸಿರುತ್ತಾರೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ 08177-221342 ಕ್ಕೆ ಸಂಪರ್ಕಿಸುವುದು.