* * * * * * HASSAN DISTRICT POLICE

Monday, April 9, 2018

PRESS NOTE : 09-04-2018


ಪತ್ರಿಕಾ ಪ್ರಕಟಣೆ             ದಿನಾಂಕ: 09-04-2018

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ, ಬಂಧಿತನಿಂದ ಸುಮಾರು 1,151/-ಬೆಲೆಯ ಮದ್ಯ ವಶ: ದಿನಾಂಕ: 08-04-2018 ರಂದು ಸಂಜೆ 3-00 ಗಂಟೆ ಸಮಯದಲ್ಲಿ ಅರಕಲಗೂಡು ತಾಲ್ಲೂಕು, ಕೊಣನೂರು ಹೋಬಳಿ, ಹಿರೇಹಳ್ಳಿಕೊಪ್ಪಲು ಗ್ರಾಮದ ವಾಸಿ ಶ್ರೀ ಈರೇಗೌಡ, ರವರ ಬಾಬ್ತು ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ ಶ್ರೀನಿವಾಸ, ಎಎಸ್ಐ, ಕೊಣನೂರು ಪೊಲೀಸ್ ಠಾಣೆ. ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ಈರೇಗೌಡ ಬಿನ್ ಚಿಕ್ಕೇಗೌಡ, 50 ವರ್ಷ, ಹೀರೆಹಳ್ಳಿಕೊಪ್ಪಲು ಗ್ರಾಮ, ಕೊಣನೂರು ಹೋಬಳಿ, ಅರಕಲಗೂಡು ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 1,151/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಬೈಕ್ನ ನಿಯಂತ್ರಣದ ತಪ್ಪಿ, ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸಾವು : ದಿನಾಂಕ: 08-04-2018 ರಂದು ಸಂಜೆ 5-30 ಗಂಟೆ ಸಮಯದಲ್ಲಿ ಹೊಳೆನರಸೀಪುರ ತಾಲ್ಲೂಕು, ಕಸಬಾ ಹೋಬಳಿ, ಅಂಕವಳ್ಳಿ ಗ್ರಾಮದ ವಾಸಿ ಶ್ರೀಮತಿ ರೇಣುಕ, ರವರು ಅದೇ ಗ್ರಾಮದ ವಾಸಿ ಶ್ರೀ ಯೋಗೇಶ್, ರವರ ಬಾಬ್ತು ಕೆಎ-04 ಇಎಕ್ಸ್-4463 ರ ಹಿರೋ ಹೊಂಡಾ ಬೈಕ್ನಲ್ಲಿ ತಮ್ಮ ಗ್ರಾಮಕ್ಕೆ ಹೋಗಲು ಅರಕಲಗೂಡು ತಾಲ್ಲೂಕು, ಕಸಬಾ ಹೋಬಳಿ, ಮೂಡನಹಳ್ಳಿ ಕ್ರಾಸ್ ಹತ್ತಿರ ಹೋಗುತ್ತಿದ್ದಾಗ ಬೈಕ್ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಹಂಪ್ಸ್ಗೆ ಡಿಕ್ಕಿಯಾದ ಪರಿಣಾಮ ಶ್ರೀಮತಿ ರೇಣುಕ, ರವರಿಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರ ಸರ್ಕಾರಿ ಕರೆದುಕೊಂಡು ಹೋಗುತ್ತಿದ್ದಾಗ ಶ್ರೀಮತಿ ರೇಣುಕ ಕೋಂ. ರಾಮೇಗೌಡ, 38ವರ್ಷ, ಅಂಕವಳ್ಳಿ ಗ್ರಾಮ, ಕಸಬಾ ಹೋಬಳಿ, ಹೊಳೆನರಸೀಪುರ ತಾಲ್ಲೂಕು,  ರವರು  ಮಾರ್ಗ ಮಧ್ಯೆ ಮೃತಪಟ್ಟಿರುತ್ತಾರೆಂದು ಮೃತರ  ಪತಿ ಶ್ರೀ ರಾಮೇಗೌಡ, ರವರು ಕೊಟ್ಟ ದೂರಿನ ಮೇರೆಗೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಬೈಕ್ ಲಾರಿಗೆ ಬೈಕ್ ಸಾವರ ಸಾವು : ದಿನಾಂಕ: 07-04-2018 ರಂದು ರಾತ್ರಿ 8-30 ಗಂಟೆ ಸಮಯದಲ್ಲಿ ಮಂಡ್ಯ ಜಿಲ್ಲೆ, ಕೆ.ಆರ್. ಪೇಟೆ ತಾಲ್ಲೂಕು, ಕಿಕ್ಕೇರಿ ಹೋಬಳಿ, ಗೊಂದಿಹಳ್ಳಿ ಗ್ರಾಮದ ವಾಸಿ ಶ್ರೀ ಅಶೋಕ, ರವರ ಬಾಬ್ತು ಬೈಕ್ನಲ್ಲಿ ಕೆಎ-06, ಜೆ-8048 ರ ಬೈಕ್ನಲ್ಲಿ ಚನ್ನರಾಯಪಟ್ಟಣಕ್ಕೆ ಬಂದಿದ್ದು, ವಾಪಸ್ ತಮ್ಮ ಗ್ರಾಮಕ್ಕೆ ಹೋಗಲು ಚನ್ನರಾಯಪಟ್ಟಣ ತಾಲ್ಲೂಕು, ಚನನ್ರಾಯಪಟ್ಟಣ-ಹೊಳೆನರಸೀಪುರ, ಹೌಸಿಂಗ್ ಬೋರ್ಡ್, ಸುಗರ್ ಬನದ ಹತ್ತಿರ ನಿಂತಿದ್ದ ಅಕ್ಸಲ್ ಬ್ಲೇಡ್ ಕಟ್ಟಾಗಿ  ಕೆಎ-13 ಎ-3459 ರ ಲಾರಿಗೆ ಬೈಕ್ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಲಾರಿಗೆ ಡಿಕ್ಕಿ ಮಾಡಿದ ಪರಿಣಾಮ ಶ್ರೀ ಅಶೋಕ ಬಿನ್ ಲಕ್ಷ್ಮೇಗೌಡ, 32 ವರ್ಷ, ಗೊಂದಿಹಳ್ಳಿ ಗ್ರಾಮ,  ಕಿಕ್ಕೇರಿ ಹೋಬಳಿ, ಕೆ. ಆರ್. ಪೇಟೆ ತಾಲ್ಲೂಕು ರವರಿಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿರುತ್ತಾರೆಂದು ಪ್ರತ್ಯಕ್ಷದರ್ಶಿ ಶ್ರೀ ಚಂದ್ರೇಗೌಡ, ಕೆ.ಬಿ. ಕೆಎಸ್ಆರ್ಟಿಸಿ, ಚಾಲಕ ರವರು ಕೊಟ್ಟ ದೂರಿನ ಮೇರೆ ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

No comments: