* * * * * * HASSAN DISTRICT POLICE

Thursday, April 19, 2018

PRESS NOTE : 18-04-2018


ಪತ್ರಿಕಾ ಪ್ರಕಟಣೆ               ದಿನಾಂಕ: 18-04-2018.


ಜಿಲ್ಲೆಯ ಅರಕಲಗೂಡು ಪಟ್ಟಣ ಮತ್ತು ರಾಮನಾಥಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಬಂಧಿತರಿಂದ ಸುಮಾರು 2435/- ಬೆಲೆಯ ಮದ್ಯ ವಶ:

 ಪ್ರಕರಣ-01 : ದಿನಾಂಕ: 17-04-2018 ರಂದು ಬೆಳಿಗ್ಗೆ 9-15 ಗಂಟೆ ಸಮಯದಲ್ಲಿ ಅರಕಗೂಡು ಪಟ್ಟಣದ ಹೊಳೆನರಸೀಪುರ-ಅರಕಲಗೂಡು ರಸ್ತೆಯ ಎಪಿಎಂಸಿ ಬಸವೇಶ್ವರ ವೃತ್ತದ ಬಳಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಕು|| ಮಧು, ಪಿಎಸ್ಐ ಅರಕಲಗೂಡು ಪೊಲೀಸ್ ಠಾಣೆ, ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ಪ್ರಸನ್ನಕುಮಾರ್ ಬಿನ್ ಈಶ್ವರಚಾರ್, 33 ವರ್ಷ, ಯಲಗತವಳ್ಳಿ ಗ್ರಾಮ, ದೊಡ್ಡಮಗ್ಗೆ ಹೋಬಳಿ, ಅರಕಲಗೂಡು ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 1,284/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಪ್ರಕರಣ-02 : ದಿನಾಂಕ: 17-04-2018 ರಂದು ಸಂಜೆ 3-30 ಗಂಟೆ ಸಮಯದಲ್ಲಿ ಅರಕಗೂಡು ತಾಲ್ಲೂಕು, ರಾಮನಾಥಪುರ ಹೋಬಳಿ, ರಾಮನಾಥಪುರ ಗ್ರಾಮದ ವಾಸಿ ಶ್ರೀ ದೇವರಾಜು, ರವರ ಬಾಬ್ತು ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ ವಿರೂಪಾಕ್ಷ, ಎಎಸ್ಐ, ಕೊಣನೂರು ಪೊಲೀಸ್ ಠಾಣೆ. ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ದೇವರಾಜು ಬಿನ್ ವೆಂಕಟರಾಮೇಗೌಡ, 40 ವರ್ಷ, ರಾಮನಾಥಪುರ ಗ್ರಾಮ, ಅರಕಲಗೂಡು ತಾಲ್ಲೂಕು, ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 1,151/ ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಹುಡುಗ ಕಾಣೆ : ದಿನಾಂಕ: 14-04-2018 ರಂದು ಬೆಳಿಗ್ಗೆ 6-00 ಗಂಟೆಗೆ ಅರಸೀಕೆರೆನಗರದ ಪಿಎನ್ಟಿ ಕ್ವಾರ್ಟರ್ಸ್ ವಾಸಿ ಶ್ರೀ ವಿಜಯಕುಮಾರ್, ಕೆ.ಜೆ. ರವರ ಮಗ ಶ್ರೀ ನಾಗಾರ್ಜುನ. ಈಗ್ಗೆ 3-4 ವರ್ಷಗಳಿಂದ ಮಾನಸಿಕ ತೊಂದರೆಯಿಂದ ಬಳಲುತ್ತಿದ್ದು, ಮನೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ನಾಗಾರ್ಜುನನ ತಂದೆ ಶ್ರೀ ವಿಜಯ್ಕುಮಾರ್, ಕೆ.ಜೆ. ರವರು ಕೊಟ್ಟ ದೂರಿನ ಮೇರೆಗೆ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗನ ಚಹರೆ: ಶ್ರೀ ನಾಗಾರ್ಜುನ ಬಿನ್ ವಿಜಯ ಕುಮಾರ್, 24 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಾಣಾ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ, ಮನೆಯಿಂದ ಹೋಗುವಾಗ ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾರೆ. ಈ ಹುಡುಗನ ಸುಳಿವು ಸಿಕ್ಕಲ್ಲಿ 08174-232233  ಕ್ಕೆ ಸಂಪರ್ಕಿಸುವುದು.

ಹೆಂಗಸು ಕಾಣೆ
ದಿನಾಂಕ: 17-04-2018 ರಂದು ಬೆಳಿಗ್ಗೆ 11-30 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಶ್ರವಣಬೆಳಗೊಳ ಹೋಬಳಿ, ಹಾಡೇನಹಳ್ಳಿ ಗ್ರಾಮ ವಾಸಿ ಶ್ರೀ ರಂಗೇಗೌಡ, ರವರ ಮಗಳು ಶ್ರೀಮತಿ ಪ್ರೇಮಾ, ಗರ್ಭಿಣಿಯಾಗಿದ್ದು, ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರಗೆ ಕರೆದುಕೊಂಡು ಬಂದಿದ್ದು, ಆಸ್ಪತ್ರೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಪ್ರೇಮಾಳ ತಂದೆ ಶ್ರೀ ರಂಗೇಗೌಡ, ರವರು ಕೊಟ್ಟ ದೂರಿನ ಮೇರೆಗೆ ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಪ್ರೇಮಾ ಕೋಂ ಮಂಜುನಾಥ್, 22 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಮತ್ತು ರವಿಕೆ ಧರಿಸಿರುತ್ತಾರೆ. ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08176-257229 ಕ್ಕೆ ಸಂಪರ್ಕಿಸುವುದು.

No comments: