ಪತ್ರಿಕಾ ಪ್ರಕಟಣೆ ದಿನಾಂಕ: 09-05-2018
ಗಂಡಸು ಕಾಣೆ : ದಿನಾಂಕ: 03-05-2018 ರಂದು ಬೆಳಿಗ್ಗೆ 11-00 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ದಂಡಿಗನಹಳ್ಳಿ ಗೋಬಳಿ, ಕುಂಬೇನಹಳ್ಳಿ ಗ್ರಾಮ ವಾಸಿ ಶ್ರೀ ಯೋಗೇಶ್, ರವರ ಬಾಬ್ತು ಕೆಎ-51
ಇಹೆಚ್-9275 ರ ಬೈಕ್ನಲ್ಲಿ ಸ್ನೇಹಿತ ಮನೆಗೆ ಊಟ
ಹೋಗಿದ್ದು, ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.
ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು
ಶ್ರೀ ಯೋಗೇಶ್, ರವರ ಪತ್ನಿ ಶ್ರೀಮತಿ ಸುಜಾತ, ರವರು ಕೊಟ್ಟ ದೂರಿನ ಮೇರೆಗೆ ಚನ್ನರಾಯಪಟ್ಟಣ
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಗಂಡಸಿನ ಚಹರೆ: ಶ್ರೀ ಯೋಗೇಶ್, ಬಿನ್ ಲೇಟ್ ಸುಬ್ಬೇಗೌಡ, 45 ವರ್ಷ, 5 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಬಣ್ಣ ಸಾಧಾರಣಾ ಮೈಕಟ್ಟು, ಮನೆಯಿಂದ ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್
ಧರಿಸಿರುತ್ತಾರೆ. ಈ ಗಂಡಸಿನ ಸುಳಿವು ಸಿಕ್ಕಲ್ಲಿ 08176-254933 ಕ್ಕೆ ಸಂಪರ್ಕಿಸುವುದು.
ಹೆಂಗಸು ಕಾಣೆ
ದಿನಾಂಕ: 04-05-2018 ರಂದು ಬೆಳಿಗ್ಗೆ 9-00 ಗಂಟೆಗೆ ಸಮಯದಲ್ಲಿ ಹೊಳೆನರಸೀಪುರ ತಾಲ್ಲೂಕು, ಹಳ್ಳಿಮೈಸೂರು ಹೋಬಳಿ, ಅಣ್ಣೇಚಾಕನಹಳ್ಳಿ ಗ್ರಾಮದ ವಾಸಿ ಶ್ರೀ ಕೃಷ್ಣ, ರವರ ಪತ್ನಿ ಶ್ರೀಮತಿ ಗೌರಮ್ಮ, ರವರು ಸಂಬಂಧಕರ ಮದುವೆಗೆ ಚನ್ನರಾಯಪಟ್ಟಣ ತಾಲ್ಲೂಕು, ಶ್ರವಣಬೆಳಗೊಳ ಹೋಬಳಿ, ಬುಸ್ತೇನಹಳ್ಳಿ ಗ್ರಾಮಕ್ಕೆ ಹೋಗಿದ್ದು, ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ
ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಗೌರಮ್ಮನ
ಪತಿ ಶ್ರೀ ಕೃಷ್ಣ, ರವರು ದಿನಾಂಕ: 08-05-2018 ರಂದು ಕೊಟ್ಟ ದೂರಿನ ಮೇರೆಗೆ ಹಳ್ಳಿಮೈಸೂರು
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಗೌರಮ್ಮ
ಕೋಂ ಕೃಷ್ಣ, 38 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು, ಮನೆಯಿಂದ
ಹೋಗುವಾಗಿ ಹಸಿರು ಬಣ್ಣದ ಸೀರೆ ಮತ್ತು ರವಿಕೆ ಧರಿಸಿರುತ್ತಾರೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ
08175-260100 ಕ್ಕೆ ಸಂಪರ್ಕಿಸುವುದು.
No comments:
Post a Comment