ಪತ್ರಿಕಾ ಪ್ರಕಟಣೆ
ದಿನಾಂಕ: 12-06-2018.
ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ, ಬೈಕ್
ಸಾವರ ಸಾವು : ದಿನಾಂಕ: 11-06-2018 ರಂದು
ಬೆಳಿಗ್ಗೆ 8-30 ಗಂಟೆ ಸಮಯದಲ್ಲಿ ಬೇಲೂರು ಪಟ್ಟಣದ ಚನ್ನಕೇಶಸ್ವಾಮಿ
ದೇವಸ್ಥಾನದ ಬೀದಿ ವಾಸಿ ಶ್ರೀ ಒಂಕಾರ್, ರವರ ಬಾಬ್ತು
ಕೆಎ-46-ಹೆಚ್-2209ರ ಹೋಂಡಾ
ಆಕ್ಟೀವ್, ಬೈಕ್ನಲ್ಲಿ ಬೇಲೂರು ತಾಲ್ಲೂಕು, ಹಾಸನ-ಬೇಲೂರು
ರಸ್ತೆ, ಹಿರೆಗುಪ್ಪೆ ಗಡಿ, ಹಿರೆಗುಪ್ಪೆ
ಗೇಟ್ ಹತ್ತಿರ ಹೋಗುತ್ತಿದ್ದಾಗ ಯಾವುದೋ ವಾಹನದ ಚಾಲಕ ಬೈಕ್ಗೆ ಡಿಕ್ಕಿ ಮಾಡಿದ ಪರಿಣಾಮ ಶ್ರೀ
ಒಂಕಾರ್ ಬಿನ್ ಚಂದ್ರೇಗೌಡ, 29 ವರ್ಷ, ಚನ್ನಕೇಶಸ್ವಾಮಿ
ದೇವಸ್ಥಾನದ ಬೀದಿ, ಬೇಲೂರು ಟೌನ್. ರವರಿಗೆ ತೀವ್ರ ಸ್ವರೂಪದ
ರಕ್ತಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆಂದು ಮೃತರ ಸಂಬಂಧಿಕರಾದ ಶ್ರೀ ಮಂಜುನಾಥ, ರವರು ಕೊಟ್ಟ
ದೂರಿನ ಮೇರೆಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.
ಹುಡುಗಿ ಕಾಣೆ : ದಿನಾಂಕ: 06-06-2018 ರಂದು
ಬೆಳಿಗ್ಗೆ 8-00 ಗಂಟೆ ಸಮಯದಲ್ಲಿ ಹಾಸನ ತಾಲ್ಲೂಕು, ಕಸಬಾ ಹೋಬಳಿ, ದೊಡ್ಡಮಂಡಿಗನಹಳ್ಳಿ
ಗ್ರಾಮದ ವಾಸಿ ಶ್ರೀ ವೀರಭದ್ರಯ್ಯ, ರವರ ಮಗಳು
ಕು|| ವಿನೋದ, ಮದುವೆ
ನಿಶ್ಚಿಯವಾಗಿದ್ದು, ಮನೆಯಿಂದ ಹಾಸನಕ್ಕೆ ಹೋಗಿ ಬರುತ್ತೇನೆಂದು ಮೆನಯಲ್ಲಿ
ಹೇಳಿ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ
ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಕು|| ವಿನೋದಳ
ಅಣ್ಣ, ಶ್ರೀ ಕಿರಣ್, ರವರು ಕೊಟ್ಟ
ದೂರಿನ ಮೇರೆಗೆ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ಕು|| ವಿನೋದ ಬಿನ್
ವೀರಭದ್ರಯ್ಯ, 25 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು
ಬಣ್ಣ, ಸಾಧಾರಣಾ ಮೈಕಟ್ಟು ಮನೆಯಿಂದ ಹೋಗುವಾಗ ಹಸಿರು ಬಣ್ಣದ
ಚೂಡಿದಾರ ಧರಿಸಿರುತ್ತಾರೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ 08172-68333 ಕ್ಕೆ ಸಂಪರ್ಕಿಸುವುದು.
ಹುಡುಗಿ ಕಾಣೆ : ದಿನಾಂಕ: 08-06-2018 ರಂದು
ಬೆಳಿಗ್ಗೆ 7-30 ಗಂಟೆ ಸಮಯದಲ್ಲಿ ಅರಸೀಕೆರೆ ಪಟ್ಟಣದ ಜೇನುಕಲ್ಲು ನಗರ, ಫೈರ್ ಆಫೀಸ್
ಹಿಂಭಾಗದ ವಾಸಿ ಶ್ರೀ ಸಂಗಯ್ಯ, ರವರ ಮಗಳು ಹಾಸನದ ಪ್ಯಾರಾ ಮೆಡಿಕಲ್
ಕಾಲೇಜಿನಲ್ಲಿ ಅಂತಿಮ ವರ್ಷದ ನಸರ್ಿಂಗ್ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಕಾಲೇಜಿಗೆ
ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ
ಕಾಣೆಯಾಗಿರುತ್ತಾಳೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು
ಕು|| ಕಾವ್ಯಳ ತಂದೆ ಶ್ರೀ ಸಂಗಯ್ಯ, ರವರು ಕೊಟ್ಟ
ದೂರಿನ ಮೇರೆಗೆ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ
ಚಹರೆ: ಕು|| ಕಾವ್ಯ ಬಿನ್ ಸಂಗಯ್ಯ, 22 ವರ್ಷ, ವಿದ್ಯಾರ್ಥನಿ, 5 ಅಡಿ ಎತ್ತರ, ಎಣ್ಣೆಗೆಂಪು
ಬಣ್ಣ, ಸಾಧಾರಣಾ ಮೈಕಟ್ಟು, ಮನೆಯಿಂದ
ಹೋಗುವಾಗ ಕೆಂಪು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ 08174-232233 ಕ್ಕೆ ಸಂಪರ್ಕಿಸುವುದು.
No comments:
Post a Comment