ಪತ್ರಿಕಾ ಪ್ರಕಟಣೆ ದಿನಾಂಕ: 31-07-2018
ಮನುಷ್ಯ ಕಾಣೆ : ದಿನಾಂಕ: 27-07-2018 ರಂದು ಬೆಳಗಿನ ಜಾವ 04-30 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ನುಗ್ಗೇಹಳ್ಳಿ ಹೋಬಳಿ, ಚಿಕ್ಕೇನಹಳ್ಳಿ
ಗ್ರಾಮದ ಅನಂತ ರವರು ಮನೆಯಿಂದ ಹೊರಗಡೆ ಹೋದವರು ವಾಪಸ್ ಮನೆಗೆ ಬಂದಿರುವುದಿಲ್ಲ. ಎಲ್ಲಾ ಕಡೆ
ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಪತ್ತೆ ಮಾಡಿಕೊಡಬೇಕೆಂದು ಅನಂತ್ ರವರ ಮಗ ಶ್ರೀ ಸಂತೋಷ ರವರು
ದಿನಾಂಕ: 30-07-2018 ರಂದು ಕೊಟ್ಟ ದೂರಿನ ಮೇರೆಗೆ ಹಿರೀಸಾವೆ
ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತದೆ. ಕಾಣೆಯಾದ ಮನುಷ್ಯನ ಚಹರೆ: ಅನಂತ ಸಿ.ಬಿ., 57 ವರ್ಷ, 5'5'' ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಶರ್ಟ್,
ಬಿಳಿ ಬಣ್ಣದ ಪಂಚೆ ಧರಿಸಿರುತ್ತಾರೆ. ಕಾಣೆಯಾದವರ
ಬಗ್ಗೆ ಸುಳಿವು ಸಿಕ್ಕಲ್ಲಿ ಹಿರೀಸಾವೆ ಠಾಣೆ ಫೋನ್ ನಂ. 08176-226888 ಕ್ಕೆ ಸಂಪರ್ಕಿಸುವುದು.
No comments:
Post a Comment