ಪತ್ರಿಕಾ ಪ್ರಕಟಣೆ
ದಿನಾಂಕ: 14-08-2018.
ಅಪರಿಚಿತ ಕಾರು, ಬೈಕ್ಗೆ ಡಿಕ್ಕಿ, ಬೈಕ್ ಸಾವರ ಸಾವು: ದಿನಾಂಕ: 13-08-2018 ರಂದು ಸಂಜೆ 6-00 ಗಂಟೆ ಸಮಯದಲ್ಲಿ ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲ್ಲೂಕು,
ಸಂತೇಬಾಚಹಳ್ಳಿ ಹೋಬಳಿ, ಕುಂದೂರು ಗ್ರಾಮದ ವಾಸಿ ಶ್ರೀ ರಮೇಶ್, ರವರ ಬಾಬ್ತು ಕೆಎ-54,ಕೆ-7202 ರ ಹೀರೋ
ಹೋಂಡಾ ಬೈಕ್ನಲ್ಲಿ ಕೆಲಸದ ನಿಮಿತ್ತ ಹಾಸನ ಜಿಲ್ಲೆ, ಚನ್ನರಾಯಪಟ್ಟಣ
ತಾಲ್ಲೂಕು, ಶ್ರವಣಬೆಳಗೊಳಕ್ಕೆ ಬಂದಿದ್ದು, ಕೆಲಸ ಮುಗಿಸಿಕೊಂಡು ವಾಪಸ್ ಚನ್ನರಾಯಪಟ್ಟಣ ತಾಲ್ಲೂಕು, ಶ್ರವಣಬೆಳಗೊಳ-ಕೆ.ಆರ್ಪೇಟೆ ರಸ್ತೆ ಸಂತೆ ಮಾಳದಿಂದ ಸ್ವಲ್ಪ ಮುಂದೆ
ಹೋಗುತ್ತಿದ್ದಾಗ ಯಾವುದೂ ಕಾರಿನ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು
ಬೈಕ್ಗೆ ಡಿಕ್ಕಿ ಮಾಡಿದ ಪರಿಣಾಮ ಶ್ರೀ ರಮೇಶ್, ರವರಿಗೆ
ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು,
ಚಿಕಿತ್ಸೆಗಾಗಿ ಶ್ರವಣಬೆಳಗೊಳ ಸಕರ್ಾರಿ
ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ
ಚನ್ನರಾಯಪಟ್ಟಣದ ನಾಗೇಶ್, ಆಸ್ಪತ್ರೆಗೆ ದಾಖಲಿಸಿದ್ದು, ಶ್ರೀ ರಮೇಶ್ ಬಿನ್ ಈರೇಗೌಡ,
53 ವರ್ಷ, ಕುಂದೂರು ಗ್ರಾಮ,
ಸಂತೇಬಾಚಹಳ್ಳಿ ಗ್ರಾಮ, ಕೆ.ಆರ್. ಪೇಟೆ, ತಾಲ್ಲೂಕು, ಮಂಡ್ಯ ಜಿಲ್ಲೆ. ರವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆಂದು ಮೃತರ ಸ್ನೇಹಿತರಾದ
ಶ್ರೀ ಅಣ್ಣಯ್ಯ, ರವರು ಕೊಟ್ಟ ದೂರಿನ ಮೇರೆಗೆ ಶ್ರವಣಬೆಳಗೊಳ ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.
ಹೆಂಗಸು ಕಾಣೆ : ದಿನಾಂಕ: 13-08-2018 ರಂದು ಬೆಳಿಗ್ಗೆ 10-00 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಕೋಟೆ ಚನ್ನರಾಯಪಟ್ಟಣದ ವಾಸಿ ಶ್ರೀಮತಿ ಶುಭ, ರವರು ಮನೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ
ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಶುಭ, ರವರ ಮಗಳು ಸೌಮ್ಯಶ್ರೀ,
ರವರು ಕೊಟ್ಟ ದೂರಿನ ಮೇರೆಗೆ
ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ
ಶುಭ ಕೋಂ ನಟರಾಜು, 45ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ,
ದುಂಡು ಮುಖ, ದೃಡಕಾಯ ಶರೀರ, ಗೋಧಿ ಮೈಬಣ್ಣ, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಟಾಪ್ ಕಪ್ಪು
ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08176 252333 ಕ್ಕೆ ಸಂಪರ್ಕಿಸುವುದು.
ಗಂಡಸು ಕಾಣೆ : ಈಗ್ಗೆ 6 ತಿಂಗಳ
ಹಿಂದೆ ಹಾಸನ ತಾಲ್ಲೂಕು, ದುದ್ದ ಹೋಬಳಿ, ಅಟ್ಟಾವರ ಗ್ರಾಮದ ವಾಸಿ ಶ್ರೀ ರಂಗೇಗೌಡ, ರವರು ಮನೆಯಲ್ಲಿ ಮಕ್ಕಳೊಂದಿಗೆ ಜಗಳ ಮಾಡಿಕೊಂಡು ಮನೆಯಿಂದ ಹೊರಗೆ ಹೋದವರು
ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ
ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ರಂಗೇಗೌಡ, ರವರ ಪತ್ನಿ ಶ್ರೀಮತಿ ಪಾರ್ವತಿ, ರವರು ಕೊಟ್ಟ
ದೂರಿನ ಮೇರೆಗೆ ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಗಂಡಸಿನ ಚಹರೆ:
ಶ್ರೀ ರಂಗೇಗೌಡ, 47 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ,
ಸಾಧಾರಣಾ ಮೈಕಟ್ಟು, ಮನೆಯಿಂದ ಹೋಗುವಾಗ ಬಿಳಿ ಶರ್ಟ್, ಕಪ್ಪು
ಪ್ಯಾಂಟ್ ಧರಿಸಿರುತ್ತಾರೆ. ಈ ಗಂಡಸಿನ ಚಹರೆ: 08172-223935 ಕ್ಕೆ ಸಂಪರ್ಕಿಸುವುದು.
No comments:
Post a Comment