ಪತ್ರಿಕಾ ಪ್ರಕಟಣೆ ದಿನಾಂಕ: 17-08-2018
ಹೆಂಗಸು ಕಾಣೆ : ದಿನಾಂಕ: 13-08-2018 ರಂದು ಬೆಳಿಗ್ಗೆ 11-35 ಗಂಟೆ ಸಮಯದಲ್ಲಿ ಸಕಲೇಶಪುರ ತಾಲ್ಲೂಕು, ಯಸಳೂರು ಹೋಬಳಿ, ದೊಡ್ಡಕಲ್ಲೂರು ಗ್ರಾಮದ ವಾಸಿ ಶ್ರೀ
ಸತೀಶ್, ರವರ ಪತ್ನಿ ಶ್ರೀಮತಿ ಮಂಜುಳ, ರವರು ಮನೆಯಿಂದ ಹೊರೆಗೆ ಹೋದವರು
ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ
ಮಂಜುಳ, ರವರ ಪತಿ ಶ್ರೀ ಸತೀಶ್, ರವರು ದಿನಾಂಕ: 16-08-2018 ರಂದು ಕೊಟ್ಟ ದೂರಿನ ಮೇರೆಗೆ ಯಸಳೂರು
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಮಂಜುಳ ಕೋಂ
ಸತೀಶ್, 30 ವರ್ಷ, 5'2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡು ಮುಖ, ಸಾಧಾರಣಾ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ.
ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08173-278212
ಕ್ಕೆ ಸಂಪರ್ಕಿಸುವುದು.
ಗಂಡಸು ಕಾಣೆ : ದಿನಾಂಕ: 04-08-2018 ರಂದು ಬೆಳಿಗ್ಗೆ 7-00 ಗಂಟೆ ಸಮಯದಲ್ಲಿ ಬೇಲೂರು ತಾಲ್ಲೂಕು, ಅರೇಹಳ್ಳಿ ಹೋಬಳಿ, ನಾಗೇಹಳ್ಳಿ ಗ್ರಾಮದ ವಾಸಿ ಶ್ರೀ
ಚಂದ್ರು, ಮನೆಯಿಂದ ಹೊರಗೆ ಹೋದವರು ಇದುವರೆವಿಗೂ
ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ಚಂದ್ರು, ರವರ ಪತಿ ಶ್ರೀಮತಿ ಚಂದ್ರಮ್ಮ, ರವರು ದಿನಾಂಕ: 16-08-2018 ರಂದು ಕೊಟ್ಟ ದೂರಿನ ಮೇರೆಗೆ ಅರೇಹಳ್ಳಿ
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಗಂಡಸಿನ ಚಹರೆ: ಶ್ರೀ ಚಂದ್ರು ಬಿನ್ ಅರ್ಜುನ, 38 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ.
ಮನೆಯಿಂದ ಹೋಗುವಾಗ ಬಿಳಿ ಶರ್ಟ, ಕಪ್ಪು ಪ್ಯಾಂಟ್ ಧರಿಸಿರುತ್ತಾರೆ. ಈ ಗಂಡಸಿನ ಸುಳಿವು ಸಿಕ್ಕಲ್ಲಿ 08177-221342 ಕ್ಕೆ ಸಂಪರ್ಕಿಸುವುದು.
No comments:
Post a Comment