* * * * * * HASSAN DISTRICT POLICE

Tuesday, September 11, 2018

PRESS NOTE : 11-09-2018


ಪತ್ರಿಕಾ ಪ್ರಕಟಣೆ             ದಿನಾಂಕ: 11-09-2018.

ಕಾರು ಬೈಕ್ಗೆ ಡಿಕ್ಕಿ ಬೈಕ್ ಸವಾರ ಸಾವು : ದಿನಾಂಕ: 10-09-2018 ರಂದು ಮಧ್ಯಾಹ್ನ 2-30 ಗಂಟೆ ಸಮಯದಲ್ಲಿ ಬೇಲೂರು ತಾಲ್ಲೂಕು, ಕಸಬಾ ಹೋಬಳಿ, ನಾರಾಯಣಪುರ ಗ್ರಾಮದ ವಾಸಿ ಶ್ರೀ ರಮೇಶ್, ರವರ ಬಾಬ್ತು ಹೊಸ ಸ್ಕೂಟಿ ಬೈಕ್ನಲ್ಲಿ ಬೇಲೂರು ತಾಲ್ಲೂಕು, ಬೇಲೂರು-ಚಿಕ್ಕಮಗಳೂರು ರಸ್ತೆ, ಚನ್ನಾಪುರ ಗಡಿ ಹತ್ತಿರ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಕೆಎ-18-ಎನ್-6676 ರ ವೋಲ್ಸ್ ವೋಗನ್ ಕಾರಿನ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಬೈಕ್ಗೆ ಡಿಕ್ಕಿ ಮಾಡಿದ ಪರಿಣಾಮ ಶ್ರೀ ರಮೇಶ್ ಬಿನ್ ಈರಯ್ಯ, 36 ವರ್ಷ, ನಾರಾಯಣಪುರ ಗ್ರಾಮ, ಕಸಬಾ ಹೋಬಳಿ, ಬೇಲೂರು ತಾಲ್ಲೂಕು, ರವರಿಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆಂದು ಮೃತರ ಸಂಬಂಧಿಕರಾದ ಶ್ರೀ ರವೀಶ್, ರವರು ಕೊಟ್ಟ ದೂರಿನ ಮೇರೆಗೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ. 

ಹೆಂಗಸು ಕಾಣೆ : ದಿನಾಂಕ: 06-09-2018 ರಂದು ಬೆಳಿಗ್ಗೆ 10-00 ಗಂಟೆ ಸಮಯದಲ್ಲಿ ಹೊಳೆನರಸೀಪುರ ತಾಲ್ಲೂಕು, ಕಸಬಾ ಹೋಬಳಿ, ಕಲ್ಲುಬ್ಯಾಡರಹಳ್ಳಿ ಗ್ರಾಮದ ವಾಸಿ ಶ್ರೀಮತಿ ಕೋಮಲಾಕ್ಷಿ, ರವರು ಹೊಳೆನರಸೀಪುರ ಬ್ಯಾಂಕಿನಿಂದ ಹಣವನ್ನು ತೆಗೆದುಕೊಂಡು ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಕೋಮಾಲಾಕ್ಷಿಯ ಪತಿ ಶ್ರೀ ರಾಘವೇಂದ್ರ, ರವರು ಕೊಟ್ಟ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಕೋಮಲಾಕ್ಷಿ ಬಿನ್ ರಾಘವೇಂದ್ರ, 35 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು, ಕನ್ನಡ ಭಾಷೆ ಮಾತನಾಡುತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಮತ್ತು ರವಿಕೆ ಧರಿಸಿರುತ್ತಾರೆ. ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08175-273308 ಕ್ಕೆ ಸಂಪರ್ಕಿಸುವುದು.

ಹುಡುಗಿ ಕಾಣೆ : ದಿನಾಂಕ: 07-09-2018 ರಂದು ಬೆಳಗಿನ ಜಾವ 4-00 ಗಂಟೆಗೆ ಅರಕಲಗೂಡು ತಾಲ್ಲೂಕು, ಕಸಬಾ ಹೋಬಳಿ, ನೈಗೆರೆ ಗ್ರಾಮದ ವಾಸಿ ಶ್ರೀ ತೋಪೇಗೌಡ @ಅಣ್ಣೇಗೌಡ, ರವರ ಮಗಳು ಒಂದು ತಿಂಗಳಿನಿಂದ ಕು|| ಸುಮ, ನಾದಿನಿ ಮನೆಯಾದ ಹಾಸನ ತಾಲ್ಲೂಕು, ಕಟ್ಟಾಯ ಹೋಬಳಿ, ಸತ್ತಿಗರಹಳ್ಳಿ ಗ್ರಾಮಕ್ಕೆ ಹೋಗಿದ್ದು, ಮನೆಯಿಂದ ಹೊರಗೆ ಹೋದವರು ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಕು|| ಸುಮಳ ತಂದೆ ಶ್ರೀ ತೋಪೇಗೌಡ @ ಅಣ್ಣೇಗೌಡ, ರವರು ಕೊಟ್ಟ ದೂರಿನ ಮೇರೆಗೆ ಗೊರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡಗಿಯ ಚಹರೆ: ಶ್ರೀ ಸುಮ ಬಿನ್ ತೋಪೇಗೌಡ @ ಅಣ್ಣೇಗೌಡ, 20 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು,  ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ 08172-225475  ಕ್ಕೆ ಸಂಪರ್ಕಿಸುವುದು.

ಹುಡುಗಿ ಕಾಣೆ : ದಿನಾಂಕ: 08-09-2018 ರಂದು ಬೆಳಗಿನ ಜಾವ ಅರಕಲಗೂಡು ತಾಲ್ಲೂಕು, ಕೊಣನೂರು ಹೋಬಳೀ, ಮಜ್ಜನಹಳ್ಳಿ ಗ್ರಾಮದ ವಾಸಿ ಶ್ರೀ ನಾಗರಾಜು, ರವರ ಮಗಳು ಕು|| ಅರ್ಪಿತಾ, ಮನೆಯಿಂದ ಹೊರಗೆ ಹೋದವಳು ಇದುವರೆವಿಗೂ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಕು|| ಅರ್ಪಿತಾಳ ತಂದೆ ಶ್ರೀ ನಾಗರಾಜು, ರವರು ಕೊಟ್ಟ ದೂರಿನ ಮೇರೆಗೆ ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ಕು|| ಅರ್ಪಿತಾ ಬಿನ್ ನಾಗರಾಜು, 21 ವರ್ಷ, 5 ಅಡಿ ಎತ್ತರ, ದುಂಡುಮುಖ, ಬಿಳಿಬಣ್ಣ, ತೆಳುವಾದ ಮೈಕಟ್ಟು, ನರ್ಸಿಂಗ್ ವ್ಯಾಸಂಗ ಮಾಡಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಕಪ್ಪು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ 08175-226227 ಕ್ಕೆ ಸಂಪರ್ಕಿಸುವುದು.

ತಾಯಿ ಮಗುವಿನೊಂದಿಗೆ ಕಾಣೆ : ದಿನಾಂಕ: 06-09-2018 ರಂದು ಬೆಳಿಗ್ಗೆ 11-00 ಗಂಟೆ ಸಮಯದಲ್ಲಿ ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬೆಳ್ಳೂರು ಕ್ರಾಸ್ ವಾಸಿ ಶ್ರೀಮತಿ ಸುಷ್ಮಾ, ಮಗು ಕು|| ಜೀವತಾನೊಂದಿಗೆ ತವರು ಮನೆಯಾದ ಬೇಲೂರು ತಾಲ್ಲೂಕು, ಮಾದಿಹಳ್ಳಿ ಹೋಬಳಿ, ಹೀರೆಗುಪ್ಪೆ ಗ್ರಾಮಕ್ಕೆ ಬಂದಿದ್ದು, ಮನೆಯಿಂದ ಹೊರೆಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಕು|| ಸುಷ್ಮಳ ತಾಯಿ ಶ್ರೀಮತಿ ಲಕ್ಷ್ಮಮ್ಮ, ರವರು ಕೊಟ್ಟ ದೂರಿನ ಮೇರೆಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಸುಷ್ಮಾ ಕೋಂ ಸ್ವಾಮಿ, 22 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಕು|| ಜೀವತಾ ಬಿನ್ ಸ್ವಾಮಿ, 1 ವರ್ಷ, ಇವರ ಸುಳಿವು ಸಿಕ್ಕಲ್ಲಿ 08177-273201 ಕ್ಕೆ ಸಂಪರ್ಕಿಸುವುದು.

No comments: