ಪತ್ರಿಕಾ ಪ್ರಕಟಣೆ ದಿ: 23-01-2019
ಅಕ್ರಮವಾಗಿ
ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ, 1,236/-
ಬೆಲೆಯ ಮದ್ಯ ವಶ:
ದಿನಾಂಕ: 22-01-2019 ರಂದು ಬೆಳಿಗ್ಗೆ 10-30
ಗಂಟೆ ಸಮಯದಲ್ಲಿ ಶ್ರೀ ತಿಮ್ಮಪ್ಪಗೌಡ, ಪಿಎಸ್ಐ ಚನ್ನರಾಯಪಟ್ಟಣ ನಗರ
ಠಾಣೆ. ರವರು ಸಿಬ್ಬಂದಿಗಳೊಂದಿಗೆ ಚನ್ನರಾಯಪಟ್ಟಣ ತಾಲ್ಲೂಕು, ಗೌಡಗೆರೆ ಗ್ರಾಮ
ವಾಸಿ ಶ್ರೀ ನಂಜೇಗೌಡ, ರವರ ಬಾಬ್ತು ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ
ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ
ಯಾವುದೇ ಪರವಾನಿಗೆಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರನ್ನು ಹಿಡಿದು ಹೆಸರು ವಿಳಾಸ
ಕೇಳಲಾಗಿ ಶ್ರೀ ನಂಜೇಗೌಡ ಬಿನ್ ರಂಗೇಗೌಡ, 30 ವರ್ಷ, ಗೌಡಗೆರೆ ಗ್ರಾಮ, ಕಸಬಾ ಹೋಬಳಿ, ಚನ್ನರಾಯಪಟ್ಟಣ
ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ 1,236/-
ನಗದನ್ನು ಅಮಾನತ್ತುಪಡಿಸಿಕೊಂಡು ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರರಕಣ ದಾಖಲಿಸಿ ಕ್ರಮ
ಕೈಗೊಂಡಿರುತ್ತೆ.
ಗೂಡ್ಸ್
ವಾಹನ ಡಿಕ್ಕಿ, ಪಾದಚಾರಿ
ಸಾವು:
ದಿನಾಂಕ: 22-01-2019 ರಂದು ಮಧ್ಯಾಹ್ನ 1-30 ಗಂಟೆ
ಸಮಯದಲ್ಲಿ ಹಾಸನ ತಾಲ್ಲೂಕು, ಕಸಬಾ ಹೋಬಳಿ, ಗವೇನಹಳ್ಳಿ ಗ್ರಾಮದ
ವಾಸಿ ಶ್ರೀ ಜಿ. ಹೋರಿಗೌಡ, ರವರು ಕೆಲಸದ ನಿಮಿತ್ತ ಹಾಸನದ ಡೈರಿ ವೃತ್ತಕ್ಕೆ
ಬಂದಿದ್ದು, ವಾಪಸ್ ಮನೆಗೆ ಹೋಗಲು ಹಾಸನಸ ಡೈರಿ ವೃತ್ತ
ಹತ್ತಿರವಿರುವ ರೈಲ್ವೆ ಬ್ರಿಡ್ಜ್ ಹತ್ತಿರ ನಡೆದುಕೊಂಡು ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ
ಕೆಎ-13, ಬಿ-8861 ರ ಗೂಡ್ಸ್ ವಾಹನದ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು
ಶ್ರೀ ಜಿ. ಹೋರಿಗೌಡ, ರವರಿಗೆ ಡಿಕ್ಕಿ ಮಾಡಿದ ಪರಿಣಾಮ ತೀವ್ರ ಸ್ವರೂಪದ
ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹಾಸನದ ಮಂಗಳ ಆಸ್ಪತ್ರೆಗೆ
ದಾಖಲಿಸಿದ್ದು, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ
ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾಗ ಶ್ರೀ ಜಿ. ಹೋರಿಗೌಡ ಬಿನ್ ಲೇಟ್ ಗಿಡ್ಡೇಗೌಡ, 62 ವರ್ಷ, ಗವೇನಹಳ್ಳಿ ಗ್ರಾಮ, ಕಸಬಾ ಹೋಬಳಿ, ಹಾಸನ ತಾಲ್ಲೂಕು.
ರವರು ಮಾರ್ಗಮಧ್ಯೆ ಮೃತಪಟ್ಟಿರುತ್ತಾರೆಂದು ಮೃತರ ಮಗ ಶ್ರೀ ಚಿದಾನಂದ, ರವರು ಕೊಟ್ಟ ದೂರಿನ
ಮೇರೆಗೆ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆಯಲ್ಲಿರುತ್ತೆ.
ಹುಡುಗಿ
ಕಾಣೆ
ದಿನಾಂಕ: 20-01-2019 ರಂದು ರಾತ್ರಿ 9-00 ಗಂಟೆ
ಸಮಯದಲ್ಲಿ ಅರಸೀಕೆರೆ ತಾಲ್ಲೂಕು, ಜಾವಗಲ್ ಹೋಬಳಿ, ವೃಂದಾವನಹಳ್ಳಿ
ಗ್ರಾಮದ ವಾಸಿ ಶ್ರೀ ಗುರುಸಿದ್ದಪ್ಪ, ರವರ ಮಗಳು ಕು|| ವಿನುತಾ, ಹಾಸನ ಸರ್ಕಾರಿ
ವಿಜ್ಞಾನ ಕಾಲೇಜಿನಲ್ಲಿ ವ್ಯಾಸಂಗ ಮಾಡಿಕೊಂಡಿದ್ದು, ಮನೆಯಿಂದ ಹೊರಗೆ
ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾಳೆ. ಎಲ್ಲಾ ಕಡೆ ಹುಡುಕಲಾಗಿ
ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಕು|| ವಿನುತಾಳ ತಂದೆ ಶ್ರೀ
ಗುರುಸಿದ್ದಪ್ಪ, ರವರು ಕೊಟ್ಟ ದೂರಿನ ಮೇರೆಗೆ ಜಾವಗಲ್ ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ಕು|| ವಿನುತಾ ಬಿನ್
ಗುರುಸಿದ್ದಪ್ಪ, 19 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ.
ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ
08174-271221 ಕ್ಕೆ ಸಂಪರ್ಕಿಸುವುದು.
ಹುಡುಗಿ
ಕಾಣೆ
ದಿನಾಂಕ: 18-01-2019 ರಂದು ರಾತ್ರಿ 9-00 ಗಂಟೆ
ಸಮಯದಲ್ಲಿ ಹಾಸನ ತಾಲ್ಲೂಕು, ಕಸಬಾ ಹೋಬಳಿ, ಲಕ್ಷ್ಮೀಪುರ
ಗ್ರಾಮದ ವಾಸಿ ಶ್ರೀ ಶ್ರೀನಿವಾಸ, ರವರ ಮಗಳು ಕು|| ಎಲ್.ಎಸ್.
ವೆನ್ನೆಲಾ, ಕಾರೆಗೇಟ್ ಗೇಟ್ ಬಳಿ ಇರುವ ಕೃಷಿ ಕಾಲೇಜಿನಲ್ಲಿ 3 ನೇ
ವರ್ಷದ ಅಗ್ರಿ ಬಯೋಟೆಕ್ ವಿದ್ಯಾಭ್ಯಾಸ ಮಾಡಿಕೊಂಡು ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸವಿದ್ದು, ಅನುಮತಿ
ಪಡೆದುಕೊಂಡು ಹಾಸ್ಟೆಲಿ ನಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ
ಕಾಣೆಯಾಗಿರುತ್ತಾಳೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು
ಕು|| ವೆನ್ನೆಲ್ಲಾಳ ತಂದೆ ಶ್ರೀ ಶ್ರೀನಿವಾಸ, ರವರು ಕೊಟ್ಟ ದೂರಿನ
ಮೇರೆಗೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ:
ಕು|| ವೆನ್ನೆಲ್ಲಾ ಬಿನ್ ಶ್ರೀನಿವಾಸ, 19 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು, ಕನ್ನಡ & ಇಂಗ್ಲೀಷ್ ಭಾಷೆ
ಮಾತನಾಡುತ್ತಾಳೆ. ಬಿಳಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ಈ ಹುಡುಗಿಯ ಸುಳಿವು ಸಿಕ್ಕಲ್ಲಿ
08172-258038 ಕ್ಕೆ ಸಂಪರ್ಕಿಸುವುದು
No comments:
Post a Comment