* * * * * * HASSAN DISTRICT POLICE

Monday, April 19, 2021

ಹಾಸನ ಜಿಲ್ಲಾ ಪೊಲೀಸ್ ಇಲಾಖೆಯ ಪತ್ರಿಕಾ ಪ್ರಕಟಣೆ ದಿ: 18-04-2021

                                                 ಪತ್ರಿಕಾ ಪ್ರಕಟಣೆ         ದಿನಾಂಕ:  18-04-2021

 ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಅಪರಿಚಿತ ವ್ಯಕ್ತಿ ಸಾವು.

ದಿನಾಂಕ: 17-04-2021 ರಂದು ಬೆಳಿಗ್ಗೆ ಸುಮಾರು 10-30 ಗಂಟೆಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದೆ ಅಂಬೇಡ್ಕರ್ ಪ್ರತಿಮೆ ಎದುರು ಮಿಲ್ಕ್ ಡೈರಿ ಹತ್ತಿರ ಹಾಸನ ಮೈಸೂರು ರಸ್ತೆಯಲ್ಲಿ ಕೆಎ-13-ಎಫ್-1985 ರ ಬಸ್ ಚಾಲಕ ತನ್ನ ಬಸ್ನ್ನು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಮಾಡಿ ಆತನ ಮೇಲೆ ಹರಿದಿದ್ದರಿಂದ ಅಪರಿಚಿತ ವ್ಯಕ್ತಿಗೆ ತೀವ್ರ ರಕ್ತಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊಳೆನರಸೀಪುರ  ನಗರ ಠಾಣೆಯ ಸಿಬ್ಬಂದಿ ಶ್ರೀ ಸುಬ್ರಹ್ಮಣ್ಯ, ಸಿಹೆಚ್ಸಿ 38 ರವರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತೆ. ಮೃತ ವ್ಯಕ್ತಿಯ ಚಹರೆ :- ಸುಮಾರು 38 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯಾಗಿದ್ದು, ಮೈಮೇಲೆ ಬಿಳಿ ಬಣ್ಣದ ಮೇಲೆ ಕಪ್ಪು ಗೆರೆಗಳಿರುವ ಅರ್ಧ ತೋಳಿನ ಶಟರ್್, ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದು, ಸುಮಾರು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಎಣ್ಣೆಗೆಂಪು ಬಣ್ಣ ಹೊಂದಿದ್ದು, ಗಡ್ಡ ಮೀಸೆ ಬಿಟ್ಟಿರುತ್ತಾರೆ.

 ಅಕ್ರಮವಾಗಿ ಮಧ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟವನ ಬಂಧನ :

ದಿನಾಂಕ: 17-04-2021 ರಂದು ಸಂಜೆ 5-00 ಗಂಟೆಯಲ್ಲಿ ಅರಸೀಕೆರೆ ತಾಲ್ಲೂಕ್, ಗಂಡಸಿ ಹೋಬಳಿಯ ರಂಗೇನಹಳ್ಳಿ ಗ್ರಾಮದ ಬಸ್ ಸ್ಟಾಪ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಧ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿರುವುದಾಗಿ ಗಂಡಸಿ ಪೊಲೀಸ್ ಠಾಣೆಯ ಪಿಎಸ್ಐ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಿಗೆಲ್ಲದೆ ಅಕ್ರಮವಾಗಿ ಮಧ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ಪಾಪಣ್ಣ ಬಿನ್ ಲೇಟ್ ಹನುಮಂತಯ್ಯ, 75 ವರ್ಷ, ಬೋವಿ ಜನಾಂಗ, ವ್ಯವಸಾಯ, ರಂಗೇನಹಳ್ಳಿ ಗ್ರಾಮ ಗಂಡಸಿ ಹೋಬಳಿ, ಅರಸೀಕೆರೆ ತಾಲ್ಲೂಕ್ ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಆತನ ವಶದಲ್ಲಿದ್ದ 60/- ರೂ ಬೆಲೆಯ 2 ರಾಜಾ ವಿಸ್ಕಿ ಪಾಕೇಟ್ಗಳನ್ನು ಅಮಾನತ್ತುಪಡಿಸಿಕೊಂಡು ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

 ಬೈಕ್ ಕಳವು:

ದಿನಾಂಕ: 04-04-2021 ರಂದು ರಾತ್ರಿ 11-00 ಗಂಟೆಯಲ್ಲಿ ಹಾಸನ ಟೌನ್ ಗುಡ್ಡೇನಹಳ್ಳಿ ವಾಸಿ ಶ್ರೀ  ಜಬೀರ್ ಹುಸೇನ್ರವರು ತಮ್ಮ ಬಾಬ್ತು ಕೆಎ-03-ಜೆಯು-2792 ರ ಬೈಕನ್ನು ಮನೆಯ ಮುಂದೆ ನಿಲ್ಲಿಸಿದ್ದು, ಮಾರನೆ ದಿನ ದಿನಾಂಕ: 05-04-2021 ರಂದು ಬೆಳಿಗ್ಗೆ ನೋಡಲಾಗಿ ಬೈಕ್ ಇರಲಿಲ್ಲ, ಯಾರೋ ಕಳ್ಳರು ಸುಮಾರು 75 ಸಾವಿರ ಬೆಲೆಯ ಬೈಕ್ನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಹಾಗೂ ಪತ್ತೆಮಾಡಿಕೊಡಬೇಕೆಂದು ಶ್ರೀ ಜಬ್ಬೀರ್ ಹುಸೇನ್, ರವರು ದಿನಾಂಕ: 17-04-2021 ರಂದು ಕೊಟ್ಟ ದೂರಿನ ಮೇರೆಗೆ ಹಾಸನ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

No comments: